Matthew 16:17 in Kannada 17 ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Other Translations King James Version (KJV) And Jesus answered and said unto him, Blessed art thou, Simon Barjona: for flesh and blood hath not revealed it unto thee, but my Father which is in heaven.
American Standard Version (ASV) And Jesus answered and said unto him, Blessed art thou, Simon Bar-jonah: for flesh and blood hath not revealed it unto thee, but my Father who is in heaven.
Bible in Basic English (BBE) And Jesus made answer and said to him, A blessing on you, Simon Bar-jonah: because this knowledge has not come to you from flesh and blood, but from my Father in heaven.
Darby English Bible (DBY) And Jesus answering said to him, Blessed art thou, Simon Bar-jona, for flesh and blood has not revealed [it] to thee, but my Father who is in the heavens.
World English Bible (WEB) Jesus answered him, "Blessed are you, Simon Bar Jonah, for flesh and blood has not revealed this to you, but my Father who is in heaven.
Young's Literal Translation (YLT) And Jesus answering said to him, `Happy art thou, Simon Bar-Jona, because flesh and blood did not reveal `it' to thee, but my Father who is in the heavens.
Cross Reference Isaiah 54:13 in Kannada 13 ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
Matthew 5:3 in Kannada 3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
Matthew 11:25 in Kannada 25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಪಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಂಥವರಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
Matthew 13:16 in Kannada 16 “ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.
Luke 10:21 in Kannada 21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
Luke 22:32 in Kannada 32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
John 1:42 in Kannada 42 ಅವನನ್ನು ಯೇಸುವಿನ ಬಳಿಗೆ ಕರದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
John 6:45 in Kannada 45 ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.
John 17:6 in Kannada 6 “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೆಯರಾಗಿದ್ದಾರೆ.
John 21:15 in Kannada 15 ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
1 Corinthians 2:9 in Kannada 9 ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
1 Corinthians 15:50 in Kannada 50 ಪ್ರಿಯರೇ, ನಾನು ಹೇಳುವುದೇನಂದರೆ, ರಕ್ತಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.
Galatians 1:11 in Kannada 11 ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
Galatians 1:16 in Kannada 16 ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿ ಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
Ephesians 1:17 in Kannada 17 ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
Ephesians 2:8 in Kannada 8 ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
Ephesians 3:5 in Kannada 5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
Ephesians 3:18 in Kannada 18 ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
Ephesians 6:12 in Kannada 12 ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
Colossians 1:26 in Kannada 26 ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.
Hebrews 2:14 in Kannada 14 ಇದಲ್ಲದೆ ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
1 Peter 1:3 in Kannada 3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
1 Peter 5:1 in Kannada 1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
1 John 4:15 in Kannada 15 ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
1 John 5:20 in Kannada 20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.