Matthew 26:24 in Kannada 24 ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನಿಗೆ ಆಯ್ಯೋ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
Other Translations King James Version (KJV) The Son of man goeth as it is written of him: but woe unto that man by whom the Son of man is betrayed! it had been good for that man if he had not been born.
American Standard Version (ASV) The Son of man goeth, even as it is written of him: but woe unto that man through whom the Son of man is betrayed! good were it for that man if he had not been born.
Bible in Basic English (BBE) The Son of man goes, even as the Writings say of him: but a curse is on that man through whom the Son of man is given up; it would have been well for that man if he had never come into the world.
Darby English Bible (DBY) The Son of man goes indeed, according as it is written concerning him, but woe to that man by whom the Son of man is delivered up; it were good for that man if he had not been born.
World English Bible (WEB) The Son of Man goes, even as it is written of him, but woe to that man through whom the Son of Man is betrayed! It would be better for that man if he had not been born."
Young's Literal Translation (YLT) the Son of Man doth indeed go, as it hath been written concerning him, but wo to that man through whom the Son of Man is delivered up! good it were for him if that man had not been born.'
Cross Reference Genesis 3:15 in Kannada 15 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
Psalm 22:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
Psalm 55:15 in Kannada 15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
Psalm 55:23 in Kannada 23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.
Psalm 69:1 in Kannada 1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಪ್ರಾಣಾಪಾಯವಾಗುವಷ್ಟು ಜಲವು ಏರಿಬಂದಿದೆ.
Psalm 109:6 in Kannada 6 ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
Isaiah 50:5 in Kannada 5 ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.
Isaiah 53:1 in Kannada 1 ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
Daniel 9:26 in Kannada 26 ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
Zechariah 12:10 in Kannada 10 ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
Zechariah 13:7 in Kannada 7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
Matthew 18:7 in Kannada 7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
Matthew 26:54 in Kannada 54 ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ? ಎಂದು ಹೇಳಿದನು.
Matthew 26:56 in Kannada 56 ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
Matthew 27:3 in Kannada 3 ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
Mark 9:12 in Kannada 12 ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
Mark 14:21 in Kannada 21 ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
Luke 22:22 in Kannada 22 ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.
Luke 24:25 in Kannada 25 ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,
Luke 24:46 in Kannada 46 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,
John 17:12 in Kannada 12 ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ಆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
John 19:24 in Kannada 24 ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.
John 19:28 in Kannada 28 ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.
John 19:36 in Kannada 36 ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
Acts 1:16 in Kannada 16 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
Acts 2:23 in Kannada 23 ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆಜಡಿದು ಕೊಂದಿರಿ.
Acts 4:28 in Kannada 28 ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
Acts 13:27 in Kannada 27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
Acts 17:2 in Kannada 2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
Acts 26:22 in Kannada 22 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
Acts 28:23 in Kannada 23 ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
1 Corinthians 15:3 in Kannada 3 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;
1 Peter 1:10 in Kannada 10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.