Matthew 3:12 in Kannada 12 ಹೊಟ್ಟನು ತೂರುವ ಮೊರವನ್ನುಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
Other Translations King James Version (KJV) Whose fan is in his hand, and he will throughly purge his floor, and gather his wheat into the garner; but he will burn up the chaff with unquenchable fire.
American Standard Version (ASV) whose fan is in his hand, and he will thoroughly cleanse his threshing-floor; and he will gather his wheat into the garner, but the chaff he will burn up with unquenchable fire.
Bible in Basic English (BBE) In whose hand is the instrument with which he will make clean his grain; he will put the good grain in his store, but the waste will be burned up in the fire which will never be put out.
Darby English Bible (DBY) whose winnowing fan [is] in his hand, and he shall thoroughly purge his threshing-floor, and shall gather his wheat into the garner, but the chaff he will burn with fire unquenchable.
World English Bible (WEB) His winnowing fork is in his hand, and he will thoroughly cleanse his threshing floor. He will gather his wheat into the barn, but the chaff he will burn up with unquenchable fire."
Young's Literal Translation (YLT) whose fan `is' in his hand, and he will thoroughly cleanse his floor, and will gather his wheat to the storehouse, but the chaff he will burn with fire unquenchable.'
Cross Reference Job 21:18 in Kannada 18 ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?
Psalm 1:4 in Kannada 4 ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
Psalm 35:5 in Kannada 5 ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.
Isaiah 1:31 in Kannada 31 ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
Isaiah 5:24 in Kannada 24 ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ಪವಿತ್ರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
Isaiah 17:13 in Kannada 13 ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
Isaiah 30:24 in Kannada 24 ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಕೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.
Isaiah 41:16 in Kannada 16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.
Isaiah 66:24 in Kannada 24 “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
Jeremiah 4:11 in Kannada 11 ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
Jeremiah 7:20 in Kannada 20 ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
Jeremiah 15:7 in Kannada 7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
Jeremiah 17:27 in Kannada 27 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.
Jeremiah 51:2 in Kannada 2 ಅನ್ಯಜನರನ್ನು ಬಾಬೆಲಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
Ezekiel 20:47 in Kannada 47 ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವುವು.
Hosea 13:3 in Kannada 3 ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
Amos 9:9 in Kannada 9 “ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
Malachi 3:2 in Kannada 2 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
Malachi 4:1 in Kannada 1 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
Matthew 13:30 in Kannada 30 ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.
Matthew 13:41 in Kannada 41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
Matthew 13:43 in Kannada 43 ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
Matthew 13:49 in Kannada 49 ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.
Mark 9:43 in Kannada 43 ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
Luke 3:17 in Kannada 17 ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
John 15:2 in Kannada 2 ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.