Cross Reference Psalm 102:26 in Kannada 26 ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
Psalm 119:89 in Kannada 89 ಲಾಮೆದ್. ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
Psalm 119:152 in Kannada 152 ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು, ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.
Isaiah 40:8 in Kannada 8 ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
Isaiah 51:6 in Kannada 6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
Matthew 5:26 in Kannada 26 ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
Matthew 6:2 in Kannada 2 “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 6:16 in Kannada 16 “ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 8:10 in Kannada 10 ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
Matthew 10:15 in Kannada 15 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 10:23 in Kannada 23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 10:42 in Kannada 42 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
Matthew 11:11 in Kannada 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 13:17 in Kannada 17 ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
Matthew 16:28 in Kannada 28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
Matthew 17:20 in Kannada 20 ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
Matthew 18:3 in Kannada 3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 18:18 in Kannada 18 “ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 19:23 in Kannada 23 ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 19:28 in Kannada 28 ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Matthew 21:21 in Kannada 21 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
Matthew 21:31 in Kannada 31 ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 23:36 in Kannada 36 ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 24:2 in Kannada 2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
Matthew 24:34 in Kannada 34 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matthew 24:47 in Kannada 47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
Matthew 25:12 in Kannada 12 ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
Matthew 25:40 in Kannada 40 ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
Matthew 25:45 in Kannada 45 ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
Matthew 26:13 in Kannada 13 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.
Mark 3:28 in Kannada 28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.
Mark 6:11 in Kannada 11 ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.
Mark 8:12 in Kannada 12 ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
Mark 9:1 in Kannada 1 ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
Mark 9:41 in Kannada 41 ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
Mark 10:15 in Kannada 15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
Mark 10:29 in Kannada 29 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,
Mark 11:23 in Kannada 23 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
Mark 12:43 in Kannada 43 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
Mark 13:30 in Kannada 30 ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Mark 14:9 in Kannada 9 ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
Mark 14:18 in Kannada 18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
Mark 14:25 in Kannada 25 ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.
Mark 14:30 in Kannada 30 ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
Luke 4:24 in Kannada 24 ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Luke 12:37 in Kannada 37 ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Luke 13:35 in Kannada 35 ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.
Luke 16:17 in Kannada 17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
Luke 18:17 in Kannada 17 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.
Luke 18:29 in Kannada 29 ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
Luke 21:32 in Kannada 32 ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Luke 23:43 in Kannada 43 ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
John 1:51 in Kannada 51 ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
John 3:3 in Kannada 3 ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು”, ಎಂದು ಉತ್ತರ ಕೊಟ್ಟನು.
John 3:5 in Kannada 5 ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
John 3:11 in Kannada 11 ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
John 5:19 in Kannada 19 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.
John 5:24 in Kannada 24 ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
John 6:26 in Kannada 26 ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
John 6:32 in Kannada 32 ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
John 6:47 in Kannada 47 ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.
John 6:53 in Kannada 53 ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
John 8:34 in Kannada 34 ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
John 8:51 in Kannada 51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.
John 8:58 in Kannada 58 ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.
John 10:1 in Kannada 1 “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.
John 10:7 in Kannada 7 ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,
John 12:24 in Kannada 24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
John 13:16 in Kannada 16 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
John 13:20 in Kannada 20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
John 13:38 in Kannada 38 ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.
John 14:12 in Kannada 12 “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
John 16:20 in Kannada 20 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.
John 16:23 in Kannada 23 ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
John 21:18 in Kannada 18 “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
Hebrews 1:11 in Kannada 11 ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
1 Peter 1:25 in Kannada 25 ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
2 Peter 3:10 in Kannada 10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
Revelation 20:11 in Kannada 11 ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.